ಗವರ್ನರ್ ಜನರಲ್ ಮತ್ತು ಬ್ರೀಟಿಷ್ ವೈಸರಾಯ್ ಗಳು
1.ವಾರನ್ ಹೇಸ್ಟಿಂಗ್ಸ್  (1774 – 1785)
*ಮೊದಲ ಬಂಗಾಳದ ಗವರ್ನರ್ ಜನರಲ್ ,
* ಇತನ ಅಧಿಕಾರಾವಧಿಯಲ್ಲಿ ರೆಗ್ಯುಲೇಟಿಂಗ್ 1773 ಕಾಯಿದೆಯನ್ನು ಪರಿಚಯಿಸಲಾಯಿತು. ಇದು ಬಂಗಾಳದಲ್ಲಿದ್ದ ದ್ವಿಮುಖ ಸರ್ಕಾರದ ಅಂತ್ಯಗೊಳಿಸಿತು.
* ಇತನನ್ನು ಆಡಳಿತದ ಕೆಟ್ಟ ನಿರ್ವಹಣೆ ಮತ್ತು ವೈಯಕ್ತಿಕ ಭ್ರಷ್ಟಾಚಾರದ ಕಾರಣಗಳಿಂದ ವಜಾಗೊಳಿಸಲಾಯಿತು. ಆದರೆ ಅಂತಿಮವಾಗಿ ನಿರ್ದೋಷಿಯೆಂದು ತೀರ್ಮಾನಿಸಲಾಯಿತು.
* ಕಂದಾಯ ಮಂಡಳಿ ಮತ್ತು ವ್ಯಾಪಾರ ಮಂಡಳಿಯ ರಚನೆ.
* ಜಿಲ್ಲಾಧಿಕಾರಿ ಹುದ್ದೆ ಸೃಷ್ಟಿ.
2.ಲಾರ್ಡ್ ಕಾರ್ನ್ ವಾಲಿಸ್ (1786 – 1793)
* ಬಂಗಾಳದಲ್ಲಿ ಖಾಯಂ ಜಮೀನ್ದಾರೀ ಪದ್ಧತಿ ಜಾರಿಗೆ (1793)
* ಪೊಲೀಸ್ ಠಾಣೆಗಳ ಸ್ಥಾಪನೆ. ಪೊಲೀಸ್ ಸುಧಾರಣೆಗಳು ಜಾರಿಯಾದವು.
* ಮೈಸೂರು ರಾಜ ಟಿಪ್ಪು ಸುಲ್ತಾನನನ್ನು ಸೋಲಿಸಲು ಮೂರನೇ ಆಂಗ್ಲೋ-ಮೈಸೂರು ಯುದ್ಧದಲ್ಲಿ ಬ್ರಿಟಿಷ್ ಪಡೆಗಳ ಭಾಗಿ.
3.ಲಾರ್ಡ್ ವೆಲ್ಲೆಸ್ಲಿ (1798 – 1805)
* ಭಾರತೀಯ ರಾಜರನ್ನು ನಿಯಂತ್ರಿಸಲು ಸಹಾಯಕ ಸೈನ್ಯ ಪದ್ಧತಿ (policy of Subsidiary Alliance) ಯನ್ನು ಪರಿಚಯಿಸಿದ.
* ಹೈದರಾಬಾದ್ ಪ್ರಾಂತ್ಯವು ಈ ಸಹಾಯಕ ಸೈನ್ಯ ಪದ್ಧತಿಗೆ ಒಳಗಾದ ಮೊದಲ ದೇಶೀಯ ಸಂಸ್ಥಾನ.
4.ಲಾರ್ಡ್ ಮಿಂಟೋ I (1807 – 1813)
* ಮಹಾರಾಜ ರಂಜಿತ್ ಸಿಂಗ್ ನೊಂದಿಗೆ ಅಮೃತಸರ ಒಡಂಬಡಿಕೆ.
ಮಾರ್ಕ್ವೆಸ್ಟ್ ಆಫ್ ಹೇಸ್ಟಿಂಗ್ (1813-1823)
* ಉನ್ನತ ಹುದ್ದೆಗಳಿಗೆ ಭಾರತೀಯರನ್ನು ನೇಮಿಸಿದ ಮೊದಲಿಗ.
* ಟೆನೆನ್ಸಿ ಕಾಯಿದೆ (1828)
ಲಾರ್ಡ್ ವಿಲಿಯಂ ಬೆಂಟಿಂಕ್ (1828 – 1835)
* ಭಾರತದ ಮೊದಲ ಗವರ್ನರ್ ಜನರಲ್ ನಾಗಿ ನೇಮಕ. (ಈ ಮೊದಲು ಬಂಗಾಳದ ಗವರ್ನರ್ ಜನರಲ್ ಎಂಬ ಹುದ್ದೆ ಇತ್ತು).
*ಸತಿ ಪದ್ಧತಿಯ ನಿಷೇಧ.
* ಭಾರತೀಯರನ್ನು ಮತ್ತೆ ಅಧೀನ ನ್ಯಾಯಾಧೀಶರಾಗಿ ನೇಮಕ ಜಾರಿ,
* ಇಂಗ್ಲೀಷ್ ಉನ್ನತ ಶಿಕ್ಷಣದ ಭಾಷೆಯಾಯಿತು.
* ಮಧ್ಯ ಭಾರತದಲ್ಲಿ ಥಗ್ಗರನ್ನು ನಿಗ್ರಹಿಸಲಾಯಿತು.
*1835ರಲ್ಲಿ ಕಲ್ಕತ್ತಾದಲ್ಲಿ ವೈದ್ಯಕೀಯ ಕಾಲೇಜು ಆರಂಭ.
ಸರ್ ಚಾರ್ಲ್ಸ್ ಮೆಟಾಕೆಫ್ (1835 – 1836)
*ಮೊದಲ ಬಾರಿಗೆ ದೇಶೀಯ ಪತ್ರಿಕೆಗಳಿಗೆ ಸ್ವಾತಂತ್ರ್ಯ. ಎಲ್ಲಾ ನಿರ್ಬಂಧಗಳನ್ನು ರದ್ದು. (ಭಾರತದ ವೃತ್ತ ಪತ್ರಗಳ ನಿರ್ಬಂಧ ವಿಮೋಚಕ)
ಲಾರ್ಡ್ ಆಕ್ಲೆಂಡ್ (1836 – 1842)
* ಮೊದಲ ಅಫಘಾನ್ ಯುದ್ಧ.
ಲಾರ್ಡ್ ಡಾಲ್ ಹೌಸಿ (1848 – 1856)
* ಬಾಂಬೆಯಿಂದ ಥಾಣೆಯವರೆಗೆ ಮೊದಲ ಭಾರತೀಯ ರೈಲ್ವೆ ಮಾರ್ಗ ನಿರ್ಮಾಣ. (1853)
* ಕೋಲ್ಕತ್ತಾದಿಂದ ಆಗ್ರಾದವರೆಗೆ ಟೆಲಿಗ್ರಾಫ್ ತಂತಿಯ ನಿರ್ಮಾಣ. (1853)
* ‘ದತ್ತು ಮಕ್ಕಳಿಗೆ ಹಕ್ಕಿಲ್ಲ’ ಪದ್ಧತಿ ಜಾರಿಗೆ. ಆ ಮೂಲಕ ಸತಾರ (1848), ಜೈಪುರ ಮತ್ತು ಸಂಬಲ್ ಪುರ್ (1849), ಉದಯ್ ಪುರ (1852), ಝಾನ್ಸಿ (1853) ಮತ್ತು ನಾಗ್ಪುರ (1854) ರಾಜ್ಯಗಳನ್ನು ವಶಪಡಿಸಿಕೊಳ್ಳಲಾಯಿತು.
* ಶಿಮ್ಲಾವನ್ನು ಬೇಸಿಗೆ ರಾಜಧಾನಿಯಾಗಿ ಮಾಡಿದ.
* ಲೋಕೋಪಯೋಗಿ ಇಲಾಖೆ ರಚನೆ
*ವಿಧವಾ ಮರುವಿವಾಹ ಕಾಯಿದೆ, (1856)ಯ ಅನುಷ್ಠಾನದೊಂದಿಗೆ ವಿಧವೆಯರ  ಮರುಮದುವೆ ಕಾನೂನುಬದ್ಧಗೊಳಿಸಲಾಯಿತು.
* ಭಾರತೀಯ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆ ಪ್ರಾರಂಭ (1853)
ಲಾರ್ಡ್ ಕ್ಯಾನಿಂಗ್ (1856 – 1862)
* 1857ರ (ಭಾರತದ ಮೊದಲ ಸ್ವಾತಂತ್ರ್ಯ ಸಂಗ್ರಾಮ) ಸಿಪಾಯಿ ದಂಗೆಯ ಸಮಯದಲ್ಲಿದ್ದ ಗವರ್ನರ್ ಜನರಲ್. ದಂಗೆಯ ನಂತರ ಭಾರತದ ಮೊದಲ ವೈಸ್ರಾಯ್ ನಾಗಿ ನೇಮಕ.
*  ‘ದತ್ತು ಮಕ್ಕಳಿಗೆ ಹಕ್ಕಿಲ್ಲ’ ಪದ್ಧತಿ ರದ್ದು.
* 1861ರಲ್ಲಿ ಭಾರತೀಯ ಕೌನ್ಸಿಲ್ ಕಾಯಿದೆ ಜಾರಿಗೆ.
*  1854 ರ ‘ವುಡ್ಸ್ ಡಿಸ್ ಪ್ಯಾಚ್’ ನ ಪ್ರಕಾರ ಕಲ್ಕತ್ತಾ, ಬಾಂಬೆ ಮತ್ತು ಮದ್ರಾಸ್ ವಿಶ್ವವಿದ್ಯಾಲಗಳ ಆರಂಭ.
*1858ರ ವಿಕ್ಟೋರಿಯಾ ಮಹಾರಾಣಿಯ ಮಹಾಸನ್ನದು “ಭಾರತದ ಮ್ಯಾಗ್ನಾಕಾರ್ಟಾ” ಪ್ರಕಟ.
* 1837ರಲ್ಲಿ ಮೆಕಾಲೆಯು ತಯಾರಿಸಿದ್ದ ‘ಭಾರತೀಯ ದಂಡ ಸಂಹಿತೆಯ ಜಾರಿ.(1860)
* ಸಿವಿಲ್ ಪ್ರೊಸೀಜರ್ ಕೋಡ್ಸ್ ಜಾರಿ.(1861)
ಲಾರ್ಡ್ ಲಾರೆನ್ಸ್ (1864 – 1869)
* ಎರಡನೇ ಸಿಖ್ ಯುದ್ಧದ ನಂತರ ಇತನು ಪಂಜಾಬ್ ಆಡಳಿತ ಇಲಾಖೆಯ ಸದಸ್ಯನಾದನು. ಮತ್ತು ಪಂಜಾಬಿನಲ್ಲಿ ಹಲವಾರು ಜವಾಬ್ದಾರಿಯುತ ಸುಧಾರಣೆಗಳನ್ನು ಜಾರಿಯಲ್ಲಿ ತಂದು “ಪಂಜಾಬ್ ದ ಸಂರಕ್ಷಕ” ನೆಂದು ಖ್ಯಾತನಾದನು.
* 1865 ರಲ್ಲಿ ಕಲ್ಕತ್ತಾ, ಬಾಂಬೆ ಮತ್ತು ಮದ್ರಾಸ್ ಗಳಲ್ಲಿ ಹೈಕೋರ್ಟ್ ಗಳನ್ನು ಸ್ಥಾಪಿಸಲಾಯಿತು.
ಲಾರ್ಡ್ ಮಾಯೋ (1869  – 1872)
*  ಭಾರತದಲ್ಲಿ ಪ್ರಥಮ ಜನಗಣತಿ (1871)
*  1872 ರಲ್ಲಿ ಅಂಡಮಾನ್ ದ್ವೀಪಗಳ ಭೇಟಿ ಸಂದರ್ಭದಲ್ಲಿ (ಕೈದಿ ಶೇರ್ ಅಲಿಯಿಂದ) ಭಾರತದಲ್ಲಿ ಕೊಲ್ಲಲ್ಪಟ್ಟ ಏಕ ಮಾತ್ರ ವೈಸರಾಯ್ .
* ಕೃಷಿ ಇಲಾಖೆಯ ಸ್ಥಾಪನೆ.
ಲಾರ್ಡ್ ಲಿಟ್ಟನ್ (1876- 1880)
*  1877 ರಲ್ಲಿ ದೆಹಲಿ ದರ್ಬಾರ್ ಆಯೋಜಿಸಿ, ರಾಣಿ ವಿಕ್ಟೋರಿಯಾಗೆ ‘ಕೈಸರ್-ಇ-ಹಿಂದ್’ ಬಿರುದು ಪ್ರಧಾನ.
*  ಭಾರತದ ವೃತ್ತ ಪತ್ರಗಳ ಮೇಲೆ ನಿರ್ಬಂಧ ವಿಧಿಸುವ ‘ದೇಶೀಯ ಪತ್ರಿಕಾ ಕಾಯಿದೆ’ ಜಾರಿಗೆ (1878)
*  ಶಸ್ತ್ರಾಸ್ತ್ರ ಕಾಯಿದೆ – (1878).
* ಸರ್.ಸಯ್ಯದ್ ಅಹ್ಮದ್ ಖಾನರಿಂದ ಅಲಿಘಡದಲ್ಲಿ ಮಹಮ್ಮದನ್ ಆಂಗ್ಲೋ ಓರಿಯಂಟಲ್ ಕಾಲೇಜು ಸ್ಥಾಪನೆ. (1877)
*ನಾಗರಿಕ ಸೇವಾ ಪರೀಕ್ಷೆ ಪ್ರವೇಶ ವಯಸ್ಸನ್ನು 21 ರಿಂದ 19ಕ್ಕೆ ಇಳಿಸಲಾಯಿತು.
*ಲಾರ್ಡ್ ರಿಪ್ಪನ್ (1880 – 1884)
* ಭಾರತದ ವೃತ್ತ ಪತ್ರಗಳ ಮೇಲೆ ನಿರ್ಬಂಧ ವಿಧಿಸುವ ‘ದೇಶೀಯ ಪತ್ರಿಕಾ ಕಾಯಿದೆ’ ರದ್ದು. (1882)
* ನಾಗರಿಕ ಸೇವಾ ಪರೀಕ್ಷೆ ಪ್ರವೇಶ ವಯಸ್ಸನ್ನು ಪುನಃ 19 ರಿಂದ 21ಕ್ಕೆ ಏರಿಸಲಾಯಿತು. (3) ಬಾಲಕಾರ್ಮಿಕ ಪದ್ಧತಿಯನ್ನು ನಿಷೇಧಿಸಲು ಮೊದಲ ಫ್ಯಾಕ್ಟರಿ ಕಾಯಿದೆ ಅಂಗೀಕಾರ (1881)
* ‘ಭಾರತೀಯ ಸ್ಥಳೀಯ ಸರ್ಕಾರಗಳ ಪಿತಾಮಹ’ – ದೇಶದಲ್ಲಿ ನಗರ ಸಭೆಗಳು, ಜಿಲ್ಲಾ ಮತ್ತು ಸ್ಥಳೀಯ ಮಂಡಳಿಗಳ ಸ್ಥಾಪನೆ. (1882)
*  ಇಲ್ಬರ್ಟ್ ಬಿಲ್ ಕಾಯಿದೆ ಜಾರಿಗೆ (1883)
*ಲಾರ್ಡ್ ಡಫೆರಿನ್ನ (1884 – 1894)
* ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ರಚಿಸ
ಲಾರ್ಡ್ ಡೌನ್  (1888 – 1894)
*ಭಾರತೀಯ ಕೌನ್ಸಿಲ್ ಕಾಯಿದೆ (1892)
* ಬ್ರಿಟಿಷ್ ಭಾರತ ಮತ್ತು ಅಫ್ಘಾನಿಸ್ಥಾನ ನಡುವೆ ಗಡಿರೇಖೆ ಗುರುತಿಸಲು ಡುರಾಂಡ್ ಆಯೋಗದ ನೇಮಕ.
ಲಾರ್ಡ್ ಕರ್ಜನ್ (1899 – 1905)
*ಬಂಗಾಳದ ವಿಭಜನೆ (1905)
*ಸ್ವದೇಶಿ ಚಳವಳಿಯ ಆರಂಭ.
* ಕೃಷಿ ಬ್ಯಾಂಕುಗಳ ಸ್ಥಾಪನೆ. ಬಂಗಾಳದ ಪೂಸಾದಲ್ಲಿ ಕೃಷಿ ಸಂಶೋಧನಾ ಸಂಸ್ಥೆ ಸ್ಥಾಪನೆ (1904)
*ಪುರಾತನ ಸ್ಮಾರಕಗಳ ಸಂರಕ್ಷಣಾ ಕಾಯಿದೆ ಜಾರಿ, ಪುರಾತತ್ವ ಇಲಾಖೆ ರಚನೆ (1901)
* ಸರ್. ಥಾಮಸ್ ರಾಲೆ. ಅಧ್ಯಕ್ಷತೆಯಲ್ಲಿ ವಿಶ್ವವಿದ್ಯಾಲಯ ಆಯೋಗ ನೇಮಕ, ‘ಭಾರತೀಯ ವಿಶ್ವವಿದ್ಯಾಲಯಗಳ ಕಾಯಿದೆ ಜಾರಿ. (1904)
* ಪೊಲೀಸ್ ಆಯೋಗ ರಚನೆ.
*ಕ್ರಿಮಿನಲ್ ತನಿಖಾ ಇಲಾಖೆ ರಚನೆ.
ಲಾರ್ಡ್ ಮಿಂಟೋ (1905 – 1910)
* ಭಾರತೀಯ ಮಂಡಳಿ ಕಾಯಿದೆ -1909 ಅಥವಾ ಮಾರ್ಲೆ-ಮಿಂಟೊ ಸುಧಾರಣೆಗಳನ್ನು ಅಂಗೀಕರಿಸಿತು.
* ಮುಸ್ಲಿಂರಿಗೆ ಪ್ರತ್ಯೇಕ ಮತಕ್ಷೇತ್ರ ಪ್ರಾತಿನಿಧ್ಯ.
*ಲಾರ್ಡ್ ಹಾರ್ಡಿಂಗ್ (1910 – 1916)
* ಇಂಗ್ಲೆಂಡ್ ನ ದೊರೆ Vನೇ ಜಾರ್ಜ್ ನ ಪಟ್ಟಾಭಿಷೇಕ – ದೆಹಲಿ ದರ್ಬಾರ್ (1911)
* ಭಾರತದ ರಾಜಧಾನಿ ಕಲ್ಕತ್ತಾದಿಂದ ದೆಹಲಿಗೆ ಸ್ಥಳಾಂತರಿಸಲಾಯಿತು (1911)
* ಅನ್ನಿ ಬೆಸೆಂಟ್ ರಿಂದ ಹೋಮ್ ರೂಲ್ ಚಳುವಳಿ ಆರಂಭಿಸಲಾಯಿತು. (1921)
*  ಮಹಾತ್ಮ ಗಾಂಧಿ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಆಗಮನ (1915)
* ಲಾರ್ಡ್ ಚೆಲ್ಮ್ಸ್ ಫೋರ್ಡ್  (1916 – 1921)
* ಭಾರತ ಸರ್ಕಾರದ ಕಾಯಿದೆ -1919 (ಮೊಂಟಾಗು ಚೆಲ್ಮ್ಸ್ ಫೋರ್ಡ್ ಸುಧಾರಣೆಗಳು)
* ರೌಲಟ್ ಕಾಯಿದೆ -1919 ಜಾರಿಗೆ.
*  ಜಲಿಯನ್ ವಾಲಾ ಬಾಗ್ ದುರಂತ. (ಏಪ್ರೀಲ್ 13, 1919)
* ಖಿಲಾಪತ್ ಚಳುವಳಿ.
*  ಅಸಹಕಾರ ಚಳುವಳಿ.
ಲಾರ್ಡ್ ರೆಡಿಂಗ್ (1921 – 1926)
* ರೌಲಟ್ ಆಕ್ಟ್ಅನ್ನು ರದ್ದುಗೊಳಿಸಲಾಯಿತು.
* ಸ್ವರಾಜ್ ಪಕ್ಷ ರಚಿಸಲಾಯಿತು.
* ಚೌರಿ ಚೌರ ಘಟನೆ.
* ಲಾರ್ಡ್ ಇರ್ವಿನ್ (1926 – 1931)
* ಸೈಮನ್ ಆಯೋಗ ಭಾರತಕ್ಕೆ ಭೇಟಿ – (1928)
* ದಂಡಿ ಸತ್ಯಾಗ್ರಹ ಪ್ರಾರಂಭಿಸಲಾಯಿತು ಭಾರತಕ್ಕೆ ಭೇಟಿ ನೀಡಿದರು.
* ನಾಗರಿಕ ಅಸಹಕಾರ ಚಳುವಳಿಯನ್ನು 1930 ರಲ್ಲಿ ಆರಂಭಿಸಲಾಯಿತು.
* ಗಾಂಧಿ – ಇರ್ವಿನ್ ಒಪ್ಪಂದಕ್ಕೆ ಸಹಿ
* ಮೊದಲ ದುಂಡು ಮೇಜಿನ ಸಭೆ.
ಲಾರ್ಡ್ ವಿಲ್ಲಿಂಗ್ಡನ್ (1931 – 1936)
* 1931ರಲ್ಲಿ ಎರಡನೇ ಮತ್ತು ಮೂರನೆಯ ದುಂಡು ಮೇಜಿನ ಸಭೆ
* ಬ್ರಿಟಿಷ್ ಪ್ರಧಾನಮಂತ್ರಿ ರಾಮ್ಸೆ ಮ್ಯಾಕ್ ಡೊನಾಲ್ಡ್ ರಿಂದ ಕಮ್ಯುನಲ್ ಅವಾರ್ಡ್   ಪ್ರಾರಂಭ.
* ಪೂನಾ ಒಪ್ಪಂದದ ಸಹಿ.
* 1935ರ ಭಾರತ ಸರಕಾರದ ಆಕ್ಟ್ ನ್ನು ಪ್ರಾಂತ್ಯಗಳಲ್ಲಿ ಜಾರಿಗೆ.
* ಲಾರ್ಡ್ ಲಿನ್ಲಿತ್ಗೋ (1936 – 1944)
* 2ನೇ ಮಹಾಯುದ್ಧದ ಆರಂಭ.
* ಕ್ರಿಪ್ಸ್ ಸಮಿತಿ 1942ರಲ್ಲಿ ಭಾರತಕ್ಕೆ ಭೇಟಿ.
* ಭಾರತ ಬಿಟ್ಟು ತೊಲಗಿ ಚಳುವಳಿ.
*ಲಾರ್ಡ್ ವೆವೆಲ್ (1944 – 1947)
*  ಕ್ಯಾಬಿನೆಟ್ ನಿಯೋಗದ ಯೋಜನೆ.
*  ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮತ್ತು ಮುಸ್ಲಿಂ ಲೀಗ್ ನಡುವೆ ಶಿಮ್ಲಾ ಸಮ್ಮೇಳನ.
* ಮುಸ್ಲಿಂ ಲೀಗ್ ನಿಂದ ಡೈರೆಕ್ಟ್ ಆ್ಯಕ್ಷನ್ ಡೇ.
* ನೆಹರೂ ನೇತೃತ್ವದ ಮಧ್ಯಂತರ ಸರ್ಕಾರದ ರಚನೆ.
* ಲಾರ್ಡ್ ಮೌಂಟ್ ಬ್ಯಾಟನ್ (ಮಾರ್ಚ್ 1947 – ಆಗಸ್ಟ್ 1947)
*  ಸ್ವತಂತ್ರ ಭಾರತದ ಮೊದಲ ಗವರ್ನರ್ ಜನರಲ್ ಹಾಗೂ ಬ್ರಿಟಿಷ್ ಭಾರತದ ಕೊನೆಯ ವೈಸರಾಯ್.
*  ಭಾರತದ ವಿಭಜನೆ.
* ಸಿ ರಾಜಗೋಪಾಲಾಚಾರಿ, ಸ್ವಾತಂತ್ರ್ಯ ಭಾರತದ ಭಾರತದ ಮೊದಲ ಮತ್ತು ಕಡೆಯ ಗವರ್ನರ್ ಜನರಲ್ ಉತ್ತರಾಧಿಕಾರಿ

Comments

Post a Comment

Popular posts from this blog

ಕರ್ನಾಟಕದ ವಿಸ್ತೀರ್ಣ

ಕರ್ನಾಟಕದ ಭೌಗೋಳಿಕ ಸ್ಥಾನ

ಪ್ರಮುಖ ಕಾಯ್ದೆಗಳು